Ticker

6/recent/ticker-posts

ಉಚಿತ 'ಟ್ಯಾಬ್' ವಿತರಣೆಗೆ ಕಾರ್ಮಿಕ ಸಚಿವ ಹೆಬ್ಬಾರ್ ಚಾಲನೆ..!

ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 287ಮಕ್ಕಳಿಗೆ ಉಚಿತ ಟ್ಯಾಬ್ ನೀಡುವ ಕಾರ್ಯಕ್ರಮಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶನಿವಾರ ಚಾಲನೆ ನೀಡಿದರು.
ದೀಪ ಬೆಳಗಿಸುವುದರ ಮೂಲಕ ಟ್ಯಾಬ್ ವಿತರಣೆಗೆ ಚಾಲನೆ ನೀಡಿ, ನಂತರ ಮಾತನಾಡಿದ ಸಚಿವರು, 'ವಿದ್ಯಾರ್ಥಿಗಳ ಬೌದ್ಧಿಕ ಮಟ್ಟ ಸುಧಾರಣೆಗೆ ಹಾಗೂ ತಂತ್ರಜ್ಞಾನದ ಯುಗದಲ್ಲಿ ಪೈಪೋಟಿ ನಡೆಸಲು ನೆರವಾಗಲು, ಉಚಿತ ಟ್ಯಾಬ್ಲೆಟ್ ಪಿ.ಸಿ ಗಳನ್ನು ನೀಡುತ್ತಿದೆ. ಇದರ ಸದುಪಯೋಗ ಆಗಲಿ' ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ಡಿಜಿಟಲ್ ತರಗತಿಯನ್ನು ಇದೇ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಪ.ಪಂ.ಅಧ್ಯಕ್ಷೆ ರೇಣುಕಾ ಹಾವೇರಿ,ಜಿಲ್ಲಾ ಪಂಚಾಯತ ಸದಸ್ಯರಾದ ಎಲ್.ಟಿ.ಪಾಟೀಲ, ರವಿಗೌಡ ಪಾಟೀಲ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ಬಿಜೆಪಿ ತಾಲೂಕು ಅಧ್ಯಕ್ಷ ನಾಗಭೂಷಣ ಹಾವಣಗಿ, ಗಣೇಶ ಶಿರಾಲಿ, ಗುರು ಕಾಮತ್, ಭರತರಾಜ ಹದಳಗಿ, ಪ್ರಾಚಾರ್ಯೆ ಇಂದಿರಾ ಬಾಗಲಕೋಟಿ ಮುಂತಾದವರು ಉಪಸ್ಥಿತರಿದ್ದರು.