Ticker

6/recent/ticker-posts

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು..!!


ಮುಂಡಗೋಡ:ಅಪಘಾತದಲ್ಲಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ, ಶುಕ್ರವಾರ ಮೃತಪಟ್ಟಿದ್ದಾರೆ. 

ತಾಲೂಕಿನ ಉಗ್ಗಿನಕೇರಿ ಗ್ರಾಮದ ಪರುಶುರಾಮ ಫಕ್ಕೀರಗೌಡ ಪಾಟೀಲ(55) ಶುಕ್ರವಾರ ಮೃತಪಟ್ಟಿದ್ದಾರೆ.

ಅಕ್ಟೋಬರ್ 17ರಂದು ಶಿಂಗನಳ್ಳಿ ಗ್ರಾಮದಲ್ಲಿ ರಸ್ತೆ ಪಕ್ಕ ನಿಂತಿದ್ದ ಪರುಶುರಾಮ ಎಂಬುವರಿಗೆ ಮಾರುತಿ ಇಕೋ ಕಾರು ಹಿಂಬದಿಯಲ್ಲಿ ಡಿಕ್ಕಿ ಹೊಡೆದಿತ್ತು. ಕೂಡಲೇ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ತಂದು, ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿತ್ತು. 

ಮುಂಡಗೋಡ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.