ನಿನ್ನು ಪೊಂಡೆ(40) ಎಂಬ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಈತನು ಸರಾಯಿ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳೊಂದಿಗೆ ಪ್ರತಿ ದಿನ ಜಗಳ ಮಾಡುತ್ತಿದ್ದನಂತೆ. ಸಾರಾಯಿ ಕುಡಿಯದಂತೆ ಬುದ್ದಿ ಮಾತು ಹೇಳುತ್ತಿದ್ದರಿಂದ ಬೇಸರ ಮಾಡಿಕೊಂಡು ಮಂಗಳವಾರ ಬೆಳಗ್ಗೆ ಮನೆಯ ಎದುರು ಇರುವ ಕಾಡಿನಲ್ಲಿ, ಮರಕ್ಕೆ ನೈಲಾನ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಹೆಂಡತಿ ಬೊಮ್ಮುಬಾಯಿ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳು